![Death: ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು Death: ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು](https://blogger.googleusercontent.com/img/b/R29vZ2xl/AVvXsEgs_3arxKRVqqpcBGf7p6RXYYNCR4ZZxYnhpJVCxMO5VYwJVfiQRmdGQIegae0RnHhuYXwq_cAjzg0-ULXzyUkIlHsAHF1aPB5vZnd_bKM48Vzy0jjjt5hwGbYHRrAwD8toENjkd3MwhSPPh5UaIG8P-UIK7mA18Cky2mcl6mNHFgIT7uAaNPvQcuJd/s320/WhatsApp%20Image%202022-05-04%20at%208.47.35%20PM.jpeg)
Death: ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಸಾವು
Monday, May 9, 2022
ಮಂಗಳೂರು:ಹಾಸ್ಟೆಲ್ ಕಟ್ಟಡವೊಂದರ ನಾಲ್ಕನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಸಮೀಪ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಣವ್ ಎಸ್. ಮುಂಡಾಸ (17), ಎಂದು ಗುರುತಿಸಲಾಗಿದೆ. ಮೂಲತಃ ಬಿಜಾಪುರದ ಸತೀಶ್ ಎಂಬುವವರ ಪುತ್ರನಾಗಿರುವ ಈತ ಮಂಗಳೂರಿನ ಕೊಟ್ಟಾರ ಚೌಕಿಯ ಚೈತನ್ಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ. ಇಂದು ಕೆಲವು ಮಕ್ಕಳು ಕ್ರಿಕೆಟ್ ಆಟವಾಡುತ್ತಿದ್ದರು. ಈ ವೇಳೆ ಹಾಸ್ಟೆಲ್ ಕಟ್ಟಡದ ಮೇಲ್ಗಡೆ ಬಾಲ್ ಬಿದ್ದಿತ್ತು. ಕಟ್ಟಡದ ನಾಲ್ಕನೇ ಮಹಡಿಯಲ್ಲಿದ್ದ ಪ್ರಣವ್ ಅದನ್ನು ಹೆಕ್ಕುವ ಸಲುವಾಗಿ ಮಹಡಿಗೆ ಅಳವಡಿಸಲಾದ ಶೀಟ್ಗೆ ಏರಿದಾಗ ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.