POLITICS: ಇದೇನಾ ಕರ್ನಾಟಕ ಮಾಡೆಲ್? ಕಾಂಗ್ರೆಸ್ ನಡೆಗೆ ಕಿಡಿಕಾರಿದ ಕುಮಾರಸ್ವಾಮಿ

POLITICS: ಇದೇನಾ ಕರ್ನಾಟಕ ಮಾಡೆಲ್? ಕಾಂಗ್ರೆಸ್ ನಡೆಗೆ ಕಿಡಿಕಾರಿದ ಕುಮಾರಸ್ವಾಮಿ


ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಒಂದು ದಿನದ ಹಿಂದೆ ' ಇಂಡಿಯಾ ' ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ ಎಂದು ಕಿಡಿ ಕಾರಿದ್ದಾರೆ
 ಬಂದಿದ್ದ ಶಿಷ್ಟಾಚಾರಕ್ಕೆ ಅರ್ಹರಲ್ಲದ ಹೊರರಾಜ್ಯಗಳ ರಾಜಕಾರಣಿಗಳಿಗೆ ಚಾಕರಿ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದ ನಿರ್ಲಜ್ಜ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಹೇಯ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಈ ಅಸಂವಿಧಾನಿಕ ನಡೆಯನ್ನು ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬರೀ ನಾಲಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸುತ್ತೇನೆ ಎನ್ನುವ ಕಾಂಗ್ರೆಸ್, ತನ್ನದೇ 'ಹಸ್ತ'ದಿಂದ ಅದೇ ಪ್ರಜಾಪ್ರಭುತ್ವವನ್ನು ಅಡ್ಡಡ್ಡ ಸಿಗಿದು ನಿರ್ನಾಮ ಮಾಡುತ್ತಿದೆ. ಇದೇನಾ ಕರ್ನಾಟಕ ಮಾಡೆಲ್? ಎಂದು ಅವರು ಪ್ರಶ್ನಿಸಿದ್ದಾರೆ

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ