DEATH: ಮಂಗಳೂರು: ಪಣಂಬೂರು ಸಮುದ್ರ ಕಿನಾರೆಯಲ್ಲಿ ಬೆಂಗಳೂರು ಮೂಲದ ಇಬ್ಬರ ಮೃತದೇಹ ಪತ್ತೆ -

DEATH: ಮಂಗಳೂರು: ಪಣಂಬೂರು ಸಮುದ್ರ ಕಿನಾರೆಯಲ್ಲಿ ಬೆಂಗಳೂರು ಮೂಲದ ಇಬ್ಬರ ಮೃತದೇಹ ಪತ್ತೆ -

 

ಮಂಗಳೂರು: ಇಲ್ಲಿನ ಪಣಂಬೂರು ಕಡಲ ತೀರದಲ್ಲಿ ಬೆಂಗಳೂರು ಮೂಲದ ಇಬ್ಬರು ಮಧ್ಯವಯಸ್ಕ ಪುರುಷ ಹಾಗೂ ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಮೃತಪಟ್ಟವರು. ಬೆಂಗಳೂರು ನಿವಾಸಿಗಳಾಗಿದ್ದ ಇವರು ಮನೆಯಲ್ಲಿ ಯಾರಿಗೂ ತಿಳಿಸದೆ ಬಂದಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ನಿನ್ನೆ ಬೆಂಗಳೂರಿನಿಂದ ಆಗಮಿಸಿದ್ದ ಇವರು ಗುರುವಾರ ಬೆಳಗ್ಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇವರಿಬ್ಬರ ನಡುವಿನ ಸಂಬಂಧವೇನು ಎಂಬ ಮಾಹಿತಿಯಿಲ್ಲ. ಸಂಬಂಧಿಕರು ಸುದ್ದಿ ಕೇಳಿ ಆತಂಕಕೊಳಗಾಗಿದ್ದು, ಮಂಗಳೂರಿಗೆ ಬರುತ್ತಿದ್ದಾರೆ. ಮೊಬೈಲ್ ಸಮುದ್ರ ದಂಡೆಯಲ್ಲಿ ಪತ್ತೆಯಾಗಿದ್ದರಿಂದ ಪಣಂಬೂರು ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಬೇಗ ಆಗಿದ್ದರಿಂದ ಪಣಂಬೂರು ತೀರದಲ್ಲಿ ಹೆಚ್ಚು ಜನ ಇರಲಿಲ್ಲ. ಇಬ್ಬರ ಮೃತದೇಹಗಳನ್ನು ಸ್ಥಳೀಯರು ಮೇಲೆತ್ತಿದ್ದು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ