B Y VIJAYENDRA PRESIDENT OF BJP KARNATAKA: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ , ಯುವನಾಯಕನಿಗೆ ಮಣೆ ಹಾಕಿದ ಹೈಕಮಾಂಡ್

B Y VIJAYENDRA PRESIDENT OF BJP KARNATAKA: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ , ಯುವನಾಯಕನಿಗೆ ಮಣೆ ಹಾಕಿದ ಹೈಕಮಾಂಡ್

 



ಬಿಜೆಪಿ ಕೊನೆಗೂ ಯುವ ನಾಯಕನಿಗೆ ಮಣೆ ಹಾಕಿದೆ. ಕಾಂಗ್ರೆಸ್ ಪಕ್ಷಕ್ಕೆ ಎದಿರೇಟು ನೀಡಲು ಸಮರ್ಥವಾಗಿರುವವರು ಯಡಿಯೂರಪ್ಪ ಪುತ್ರ ವಿಜಯೇಂದ್ರ ಎಂದು ಮನಗಂಡಿದೆ. ಈ ಮೂಲಕ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡಿ, ಬೊಮ್ಮಾಯಿಗೆ ಅಧಿಕಾರ ನೀಡಿದ ಬಳಿಕ ಪಕ್ಷದಲ್ಲಾದ ಬೆಳವಣಿಗೆ, ಪಕ್ಷದ ನಾಯಕರು ಅಲ್ಲಲ್ಲಿ ಚದುರುತ್ತಿರುವವರನ್ನು ಗಮನಿಸಿ ಸೂತ್ರವನ್ನು ನೀಡಲು ಯಡಿಯೂರಪ್ಪ ಪುತ್ರನೇ ಬೆಸ್ಟ್ ಎಂದು ಭಾವಿಸಿದೆ.

ವಿಜಯೇಂದ್ರ ಯುವ ನಾಯಕರಾಗಿರುವ ಕಾರಣ ಕಾರ್ಯಕರ್ತರ ಪಡೆ ಇನ್ನಷ್ಟು ಬಲವಾಗುವ ಜತೆಗೆ ಪಕ್ಷ ಸಂಘಟನಾ ಸಾಮರ್ಥ್ಯ ಹೆಚ್ಚಾಗುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ. ಇದರ ಜೊತೆ ಪ್ರಬಲ ಸಮುದಾಯವಾದ ಲಿಂಗಾಯತ ಮತಬ್ಯಾಂಕ್ ರಕ್ಷಣೆ, ಸಮುದಾಯದ ನಾಯಕರ ವಲಸೆ ತಡೆಗೂ ಬ್ರೇಕ್ ಬೀಳುವ ನಿರೀಕ್ಷೆಯನ್ನೂ ಇಟ್ಟುಕೊಂಡಿದೆ.

ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ  ಸಹಿತ ಹಲವರ ಹೆಸರು ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ಲೋಕಸಭಾ ಚುನಾವಣೆ ದೃಷ್ಟಿಯಿಂದ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ ಎನ್ನಲಾಗಿದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಪಕ್ಷ ಬದಲಾಯಿಸಿದ ಹಿನ್ನೆಲೆಯಲ್ಲಿ ಲಿಂಗಾಯಿತ ಮತಬ್ಯಾಂಕ್ ಗಟ್ಟಿಗೊಳಿಸುವ ಇರಾದೆಯೂ ಪಕ್ಷಕ್ಕಿದೆ.


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ