-->
News: ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

News: ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

 


ಮಂಗಳೂರು: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಗಣತಿ ವರದಿ: ವಿರೋಧ ಏಕೆ?

ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ

ಉಲ್ಲಾಳ್ ನಲ್ಲಿ ನಡೆದಿರುವ ದರೋಡೆ ಪ್ರಕರಣದ  ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ