
UDUPI NEWS: ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್: ತನಿಷ್ಕ ಗೆಲುವು
Thursday, August 7, 2025
ಉಡುಪಿ : ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ ನಾ ಕುಮುಟಿ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ತನಿಷ್ಕ ಪವನ್ ಕುಮಾರ್ ವಿಜಯ ಶಾಲಿಯಾಗಿರುತಾಳೆ. ಉಡುಪಿ ಅಜ್ಜರಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ. ಈಕೆ ಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಕೂರಿಯಾಳದ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಪುತ್ರಿ ಹಾಗೂ ಜಗದೀಶ್ ಭಂಡಾರಿ ಕುರಿಯಾಳ ಮತ್ತು ಮೋಹಿನಿ ಜಗದೀಶ್ ಭಂಡಾರಿ ಮೊಮ್ಮಗಳು ಇನ್ಸ್ಟಿಟ್ಯೂಟ್ ಆಫ್ ಬುಡಕೊನ್ ಕರಾಟೆ ಮಾರ್ಷಯಲ್ ಆರ್ಟ್ ನ ಕೋಚ್ ಅದ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ